Friday, March 6, 2020

ಧನ ಪುರಾಣ

ಇದ್ದರೆ ಚಿಂತೆ, ಇಲ್ಲದಿದ್ದರೆ ತೊಂದರೆ,
ಬಲ್ಲೆಯಾ ಧನದ ಈ ಮೂಲ ಮಂತ್ರ?
ಇದ್ದರೆ ಮತ್ತಷ್ಟು ಸೇರುವುದು ನೋಡು,
ಇಲ್ಲದಿರೆ ಗಳಿಸಲು ಪಡಬೇಕು ಪಾಡು!

ಬೆಟ್ಟದಲ್ಲೆಲ್ಲೋ ಹುಟ್ಟಿದಾ ನದಿಯು,
ಹರಿಹರಿದು ಸಾಗರವ ಸೇರುವಂತೆ,
ಬಡವರ ಕಿಸೆಯಿಂದ ಹಾರಿ ಬಂದು,
ದೊಡ್ಡ ಬೊಕ್ಕಸಗಳ ತುಂಬಿತಂತೆ.

ಹೊನ್ನು, ಮಣ್ಣು, ಅಧಿಕಾರಗಳ ಬಹುರೂಪಿ,
ಹಲವರಿಗೆ ಇದು ದೇವತಾ ಸ್ವರೂಪಿ.
ಅತಿಯಾದ ಆಸೆ ಮನುಜನ ಖಾಯಿಲೆ,
ಇದಕ್ಕೆ ಮದ್ದಿಲ್ಲ, ಅಳಿಯುವುದು ಸುಟ್ಟಾಗಲೇ!

ಧನಕ್ಕಿದೆ ಧನವನ್ನು ಸೃಷ್ಟಿಸುವ ಶಕ್ತಿ,
ಜೀವ ಜಂತುಗಳಂತೆ ಬೆಳೆಸುವುದು ಸಂತತಿ!
ಸಮಾಧಿ ಮಾಡಿದರೂ ಭೂಮಿ ಅಗೆದು,
ಎದ್ದುಬರುವುದು ನೋಡು ಮರುಜನ್ಮ ಪಡೆದು!

No comments: