ಚುಟುಕು: ನಾಲ್ಕು ಸಾಲುಗಳ ಕವನ. ಅಂತ್ಯಪ್ರಾಸ ಕಡ್ಡಾಯ
ದತ್ತಪದ : ಬದಲಾವಣೆ
ಇರಬೇಕು ಸಹನೆ ತಪ್ಪಿಸಲು ಬಲು ಬವಣೆಕರಗಿಸುತ ಕೋಪವನು ಸಹನೆಗೆ ಹಾಕು ಮಣೆ
ಸುರಿಯುವುದು ಎದೆಯಲ್ಲಿ ದಯೆ ಮತ್ತು ಕರುಣೆ
ತರುವುದು ಬದುಕಿನಲಿ ಸುಂದರ ಬದಲಾವಣೆ
ದತ್ತಪದ : ಧಾರಾಕಾರ
ಧಾರಾಕಾರ ಮಳೆಗೆ ರಸ್ತೆಗಳು ನದಿಯ ಧಾರ,
ವಾಹನ ಸಂಚಾರವಾಯಿತು ಬಹಳ ದುಸ್ತರ!
ಜನತೆ ಕೇಳಿತು ಸರ್ಕಾರವ ಏಕೀ ಅವಾಂತರ?
ಹಿಂದಿನ ಸರ್ಕಾರವ ದೂರಿತು ಈಗಿನ ಸರ್ಕಾರ!
ನನ್ನ ಮೊದಲ ಸ್ಪರ್ಶ ನೀನಮ್ಮ,
ನನ್ನ ಮೊದಲ ಪರಿಚಯ ನೀನಮ್ಮ,
ನಿನ್ನೆದೆಯ ಬಡಿತ ಜೋಗುಳವಮ್ಮ,
ನನ್ನ ಮೊದಲ ತೊದಲೇ "ಅಮ್ಮ"!
ದತ್ತಪದ: ಮನೆ
ಮನೆಯಿರಬೇಕು ಮಕ್ಕಳಿಗೆ ತೆನೆಯಂತೆ ಕಾಳಿಗೆ
ಬೆಳೆಯಬೇಕು ಸಂತಸದಲಿ ಬರವಿರದಂತೆ ಕೂಳಿಗೆ
ಹೂವರಳುವಂತೆ ಮನ ವಿಕಸಿಸಬೇಕು ಬೆಳೆಯುತ
ಸಮಾಜಕೆ ಉಪಕಾರಿಯಾಗಬೇಕು ಬಾಳು ಬಾಳುತ
ದತ್ತಪದ : ನಗು-ಹ್ಯಾಪಿ
ನಗುತಿರಲು ಹ್ಯಾಪಿ, ನಗದಿರುವ ಪಾಪಿ,
ಅವನು ಕೋಪಿ, ಬರುವುದವಗೆ ಬೀಪಿ.
ಮಾಡಿದರೂ ಕಾಪಿ, ಊದುತಿರು ಪೀಪಿ,
ಹಾಕಿದರೂ ಟೋಪಿ, ಆಗದಿರು ಪಾಪಿ.
ದತ್ತಪದ : ಶ್ರಾವಣ
ಬಂತದೋ ಶ್ರಾವಣ ತಂದಿತೋ ತೋರಣ,
ಸಡಗರಕ್ಕೆ ಹೂರಣ ಹಬ್ಬಗಳೇ ಕಾರಣ,
ಭಕ್ತಿಯಲಿ ಪೂಜನ, ಮಂತ್ರಗಳ ಪಠಣ,
ತನುಮನಕೆ ರಸನಕ್ಕೆ ದಿನದಿನವೂ ಔತಣ!